Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:3 - ಕನ್ನಡ ಸತ್ಯವೇದವು J.V. (BSI)

3 ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:3
9 ತಿಳಿವುಗಳ ಹೋಲಿಕೆ  

ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.


ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಹೋದರು; ಕುರಿದನ ಮೊದಲಾದ ಪಶುಗಳೂ ಬಹಳವಾಗಿದ್ದವು. ಅವರು ಐಗುಪ್ತದೇಶದಿಂದ ತಂದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ?


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ಹಸಿವೆನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು