Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:22 - ಕನ್ನಡ ಸತ್ಯವೇದವು J.V. (BSI)

22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ; ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವದರಿಂದ ನಿನಗೆ ಸುಲಭವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:22
12 ತಿಳಿವುಗಳ ಹೋಲಿಕೆ  

ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.


ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಬಳಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳ ಬಳಿಗೂ ಬಂದು -


ಅವರು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರು ಇವರೆಲ್ಲರ ಮುಂದೆ ನಿಂತು ಅವರಿಗೆ -


ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು.


[ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ಈ ಕೆಲಸ ಬಹು ಕಷ್ಟವಾದದ್ದು; ನೀನೊಬ್ಬನೇ ಅದನ್ನು ನಡಿಸಲಾರಿ; ನೀನೂ ನಿನ್ನ ಸಂಗಡ ಇರುವ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.


ದೇವರು ಹೀಗೆ ಮಾಡುವದಕ್ಕೆ ನಿನಗೆ ಅಪ್ಪಣೆ ಕೊಡುವದಾದರೆ ನೀನು ಈ ಕೆಲಸದ ಭಾರವನ್ನು ನಿರ್ವಹಿಸಲಾಗುವದು; ಇದು ಮಾತ್ರವಲ್ಲದೆ ಈ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಸಂತೋಷವಾಗಿ ಹೋಗುವರು ಎಂದು ಹೇಳಿದನು.


ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು