Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:13 - ಕನ್ನಡ ಸತ್ಯವೇದವು J.V. (BSI)

13 ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:13
11 ತಿಳಿವುಗಳ ಹೋಲಿಕೆ  

ಯಾಕಂದರೆ - ಒಂದು ಮೃಗವಾದರೂ ಬೆಟ್ಟಕ್ಕೆ ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ ವಿಧಿಯನ್ನು ತಾಳಲಾರದೆ ಇದ್ದರು.


ತುತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ ಮೋಶೆಯು [ದೇವರ ಸಂಗಡ] ಮಾತಾಡಿದನು; ಆಗ ದೇವರು ಬಾಯಿ ಮಾತಿನಿಂದ ಉತ್ತರಕೊಟ್ಟನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಲು ಅವರು ಬೆಟ್ಟದ ಬುಡದಲ್ಲಿ ನಿಂತುಕೊಂಡರು.


ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಪ್ರದೇಶದಲ್ಲಿ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಮುಂದೆ ಮೇಯಕೂಡದು ಎಂದು ಹೇಳಿದನು.


ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು