Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:21 - ಕನ್ನಡ ಸತ್ಯವೇದವು J.V. (BSI)

21 ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:21
12 ತಿಳಿವುಗಳ ಹೋಲಿಕೆ  

ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.


ಅದರೆ ಆತನು ಅವನಿಗೆ - ನೀನು ನನ್ನ ಮುಖವನ್ನು ನೋಡುವದಕ್ಕಾಗದು; ಮನುಷ್ಯರಲ್ಲಿ ಯಾವನೂ ನನ್ನನ್ನು ನೋಡಿ ಜೀವಿಸಲಾರನು ಎಂದು ಹೇಳಿದನು.


ಆಗ ಮೋಶೆ - ನಾನು ದಾರಿ ಬಿಟ್ಟು ಈ ಆಶ್ಚರ್ಯವನ್ನು ನೋಡಿ ಪೊದೆಯು ಸುಟ್ಟು ಹೋಗದೆ ಇರುವದಕ್ಕೆ ಕಾರಣವನ್ನು ತಿಳುಕೊಳ್ಳುವೆನು ಅಂದುಕೊಂಡನು.


ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.


ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು ಬೆಟ್ಟವನ್ನು ಹತ್ತದೆಹೋಗಲಾಗಿ ನಾನು ಯೆಹೋವನಿಗೂ ನಿಮಗೂ ನಡುವೆ ನಿಂತು ಆತನು ಆಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನಂದರೆ -


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಕೆಹಾತ್ಯರ ಗೋತ್ರ ಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವದಕ್ಕೆ ಆಸ್ಪದಕೊಡಬೇಡಿರಿ.


ಅವರು ಮಹಾಪರಿಶುದ್ಧವಸ್ತುಗಳ ಹತ್ತಿರಕ್ಕೆ ಬರುವಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನಂದರೆ - ಆರೋನನೂ ಅವನ ಮಕ್ಕಳೂ ಒಳಗೆ ಬಂದು ಅವರವರ ಕೆಲಸಗಳನ್ನೂ ಅವರವರ ಹೊರೆಗಳನ್ನೂ ಗೊತ್ತುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು