Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:24 - ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಅವನಿಗೆ - ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರೂ ಜನರೂ ಆ ಮೇರೆಯನ್ನು ದಾಟಿ ಯೆಹೋವನ ಹತ್ತಿರ ಬರಕೂಡದು; ದಾಟಿದರೆ ಯೆಹೋವನು ಅವರನ್ನು ಫಕ್ಕನೆ ಸಂಹಾರ ಮಾಡಾನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:24
20 ತಿಳಿವುಗಳ ಹೋಲಿಕೆ  

ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.


ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;


ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.


ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಮೇರೆಯನ್ನು ಮಾಡಿಸಿ ಜನರಿಗೆ - ಎಚ್ಚರಿಕೆಯಾಗಿರ್ರಿ, ನೀವು ಈ ಬೆಟ್ಟವನ್ನು ಏರಲೂ ಕೂಡದು ಅದರ ಅಂಚನ್ನು ಮುಟ್ಟಲೂಕೂಡದು. ಮುಟ್ಟಿದವನಿಗೆ ಅಗತ್ಯವಾಗಿ ಪ್ರಾಣಶಿಕ್ಷೆಯಾಗಬೇಕು.


ಮೋಶೆ ಜನರ ಬಳಿಗೆ ಇಳಿದು ಹೋಗಿ [ಆ ಮಾತುಗಳನ್ನು] ಅವರಿಗೆ ತಿಳಿಸಿದನು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವಮಂಜೂಷವನ್ನು ಹಿಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು