Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:14 - ಕನ್ನಡ ಸತ್ಯವೇದವು J.V. (BSI)

14 ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:14
17 ತಿಳಿವುಗಳ ಹೋಲಿಕೆ  

ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ


ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ದಾರಿ ಬಿಡು ಎಂದು ಹೇಳಿ - ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯ ಹೇಳುವವನಾಗಬೇಕೋ; ಆ ಮನುಷ್ಯರಿಗೆ ಕೇಡು ಮಾಡುವದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ಇರುಕಿಸಿ ಕದವನ್ನು ಒಡೆದು ಬಿಡಬೇಕೆಂದಿದ್ದರು.


ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.


ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು