Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:20 - ಕನ್ನಡ ಸತ್ಯವೇದವು J.V. (BSI)

20 ಅವರ ತಂದೆ ಅವರಿಗೆ - ಆ ಮನುಷ್ಯನೆಲ್ಲಿ? ಅವನನ್ನು ಯಾಕೆ ಬಿಟ್ಟು ಬಂದಿರಿ? ಊಟ ಮಾಡುವದಕ್ಕೆ ಕರೆಯಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:20
12 ತಿಳಿವುಗಳ ಹೋಲಿಕೆ  

ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಪರಸ್ಥಳದವನು ಬೈಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೇಬಾಗಲುಗಳನ್ನು ತೆರೆದಿದ್ದೆನಷ್ಟೆ.


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಬೆಳಿಸಬಹುದು ಎನ್ನಲು ಅವರು - ನೀನು ಹೇಳಿದಂತೆ ಮಾಡಬಹುದು ಅಂದರು.


ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು


ಐಗುಪ್ತ್ಯನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಗೆ ತಪ್ಪಿಸಿದನು; ಇಷ್ಟು ಮಾತ್ರವಲ್ಲದೆ ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು ಅಂದರು.


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು