Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:23 - ಕನ್ನಡ ಸತ್ಯವೇದವು J.V. (BSI)

23 ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:23
31 ತಿಳಿವುಗಳ ಹೋಲಿಕೆ  

ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ನಾಲ್ವತ್ತು ವರುಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.


ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.


ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಸೇರಿ ಕೇಳಿಸಿತು.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಐಗುಪ್ತದೇಶದಲ್ಲಿ ನಮ್ಮ ಪಿತೃಗಳಿಗಿದ್ದ ಕಷ್ಟವನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಲಾಲಿಸಿದಿ.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ವಿುದ್ಯಾನ್‍ದೇಶದಲ್ಲಿ ಯೆಹೋವನು ಮೋಶೆಗೆ - ನೀನು ಐಗುಪ್ತದೇಶಕ್ಕೆ ತಿರಿಗಿ ಹೋಗು; ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದು ಹೇಳಿದ್ದರಿಂದ


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.


ಅವರು ಫರೋಹನ ಹತ್ತಿರ ಮಾತಾಡಿದ ಕಾಲದಲ್ಲಿ ಮೋಶೆ ಎಂಭತ್ತು ವರುಷದವನೂ ಆರೋನನು ಎಂಭತ್ತುಮೂರು ವರುಷದವನೂ ಆಗಿದ್ದರು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ಐಗುಪ್ತ್ಯರು ದಾಸರನ್ನಾಗಿ ಮಾಡಿಕೊಂಡಿರುವ ಇಸ್ರಾಯೇಲ್ಯರ ಗೋಳು ಈಗ ನನಗೆ ಕೇಳಿಸಿತು.


ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಿದನು. ಆದರೂ ಅವರ ಮನಸ್ಸು ಕುಗ್ಗಿ ಹೋದದರಿಂದಲೂ ಕಠಿಣವಾಗಿ ಸೇವೆಮಾಡಬೇಕಾದದರಿಂದಲೂ ಅವರು ಅವನ ಮಾತಿಗೆ ಕಿವಿಗೊಡಲೇ ಇಲ್ಲ.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.


ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲೇ ಬೇಗನೆ ಸದುತ್ತರವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು