ವಿಮೋಚನಕಾಂಡ 20:24 - ಕನ್ನಡ ಸತ್ಯವೇದವು J.V. (BSI)24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿ |