Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:29 - ಕನ್ನಡ ಸತ್ಯವೇದವು J.V. (BSI)

29 ಆದರೆ ಆ ಎತ್ತು ತತ್ಪೂರ್ವದಲ್ಲಿ ಹಾಯುವ ಸ್ವಭಾವದ್ದೆಂದು ಒಡೆಯನು ಎಚ್ಚರಿಕೆಯನ್ನು ಹೊಂದಿದಾಗ್ಯೂ ಅದನ್ನು ಕಟ್ಟಿಹಾಕದೆ ಹೋದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದ್ದಾದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಒಡೆಯನೂ ಮರಣಶಿಕ್ಷೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ಆ ಎತ್ತು ಹಿಂದಿನಿಂದಲೂ ತಿವಿಯುವ ಸ್ವಭಾವದ್ದೆಂದು ಒಡೆಯನಿಗೆ ಎಚ್ಚರಿಕೆ ನೀಡಿದ್ದರೂ ಅವನು ಅದನ್ನು ಕಟ್ಟಿಹಾಕದೆ ಹೋದ ಕಾರಣ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು, ಮಾತ್ರವಲ್ಲ ಆ ಒಡೆಯನು ಕೂಡ ಮರಣದಂಡನೆಗೆ ಗುರಿ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲೀಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲೀಕನನ್ನೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:29
5 ತಿಳಿವುಗಳ ಹೋಲಿಕೆ  

ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.


ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದುಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು; ಅದರ ಮಾಂಸವನ್ನು ತಿನ್ನಕೂಡದು; ಆ ಎತ್ತಿನ ಒಡೆಯನೋ ನಿರ್ದೋಷಿ.


ಆದರೆ ಆ ಒಡೆಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು [ನ್ಯಾಯಾಧಿಪತಿಗಳು] ತೀರ್ಮಾನಿಸಿದರೆ ನೇಮಕವಾದ ಹಣವನ್ನು ಅವನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು.


ಆದರೆ ಅದಕ್ಕೆ ಮುಂಚಿತವಾಗಿ ಆ ಎತ್ತು ಹಾಯುವಂಥದೇ ಎಂದು ತಿಳಿದಿದ್ದಾಗ್ಯೂ ಅದರ ಒಡೆಯನು ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು