Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:25 - ಕನ್ನಡ ಸತ್ಯವೇದವು J.V. (BSI)

25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ನಡಿಸಬಾರದು; ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:25
20 ತಿಳಿವುಗಳ ಹೋಲಿಕೆ  

ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ಸಾಲಕ್ಕೆ ಬಡ್ಡಿ ತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ


ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.


ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -


ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.


ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ಕೂಡಲೆ ಎಣ್ಣೆಯುಕ್ಕುವದು ನಿಂತು ಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ - ಹೋಗಿ ಎಣ್ಣೆಯನ್ನು ಮಾರಿ ಸಾಲತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ


ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿಸಹಿತ ಪಡಕೊಳ್ಳುತ್ತಿದ್ದೆನು ಎಂದು ಹೇಳಿ


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು