Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:11 - ಕನ್ನಡ ಸತ್ಯವೇದವು J.V. (BSI)

11 ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:11
24 ತಿಳಿವುಗಳ ಹೋಲಿಕೆ  

ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಕೆಲಸನಡಿಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.


ಆಮೇಲೆ ಅವನು ಶತಾಧಿಪತಿಗಳು ಶ್ರೀಮಂತರು ಜನನಾಯಕರು ಸಾಧಾರಣಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ನಾವು ಸಾಯಬೇಕು. ದೇವರನ್ನು ಕಣ್ಣಾರೆ ಕಂಡೆವಲ್ಲಾ ಅನ್ನಲು


ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು; ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ಇದು ಪ್ರಧಾನರು ದಂಡಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ ಎಂಬದೇ.


ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.


ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸುರೇ ಇಲ್ಲ ಎಂದು ಹೇಳಿದೆನು.


ಸುತ್ತಲೂ ನನ್ನನ್ನು ಆವರಿಸಿ ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು