Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:12
21 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು; ಆಮೇಲೆ ಇನ್ನು ಮಾತಾಡಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.


ನೀವು ಹೊಳೆ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದೂ; ಇವುಗಳನ್ನೆಲ್ಲಾ ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ಮೋಶೆ ಬೆಟ್ಟವನ್ನು ಹತ್ತಿದಾಗ ಮೇಘವು ಅದನ್ನು ಮುಚ್ಚಿಕೊಂಡಿತು.


ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಅವನ ಜೊತೆಯವರಲ್ಲಿ ಸಮೀಪಕ್ಕೆ ಯಾರೂ ಬರಬಾರದು; ವಿುಕ್ಕ ಜನರು ಬೆಟ್ಟವನ್ನು ಹತ್ತಬಾರದು ಎಂದು ಹೇಳಿದನು.


ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.


ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.


ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು.


ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.


ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ - ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು;


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು