Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರ ಮಹಿಮೆಯು ಸೀನಾಯಿ ಬೆಟ್ಟದ ಮೇಲೆ ನೆಲೆಯಾಗಿದ್ದುದರಿಂದ ಮೇಘವು ಅದನ್ನು ಆರು ದಿನಗಳವರೆಗೆ ಮುಚ್ಚಿಕೊಂಡಿತು. ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:16
14 ತಿಳಿವುಗಳ ಹೋಲಿಕೆ  

ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಸಮೂಹದವರೆಲ್ಲರೂ ಹೀಗೆ ಮೋಶೆ ಆರೋನರಿಗೆ ವಿರೋಧವಾಗಿ ಕೂಡಿದ್ದಾಗ ದೇವದರ್ಶನದ ಗುಡಾರದ ಕಡೆಗೆ ನೋಡಲಾಗಿ ಆಹಾ, ಮೇಘವು ಅದನ್ನು ಮುಚ್ಚಿಕೊಂಡಿತು, ಮತ್ತು ಯೆಹೋವನ ತೇಜಸ್ಸು ಹೊಳೆಯಿತು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು.


ತರುವಾಯ ಮೋಶೆಯೂ ಆರೋನನೂ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಯೆಹೋವನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಾಯೇಲ್ಯರಿಗೆ ಕಾಣಿಸಿತು.


ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಮಕ್ಕಳು ಹೆಣ್ಣು ಮಕ್ಕಳು ಗಂಡಾಳು ಹೆಣ್ಣಾಳು ಪಶುಗಳು ನಿನ್ನ ಊರಲ್ಲಿ ಇರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.


ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ನೀವು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವದು ಎಂದು ಹೇಳಿದನು.


ಚೀಯೋನ್ ಪರ್ವತದ ಸಂಪೂರ್ಣ ಮಂದಿರದ ಮೇಲೆಯೂ ಅಲ್ಲಿನ ಕೂಟಗಳ ಮೇಲೆಯೂ ಹಗಲಲ್ಲಿ ಧೂಮಮೇಘವನ್ನು, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನು, ಉಂಟು ಮಾಡುವನು. [ಈ] ಪ್ರಭಾವದ ಮೇಲೆಲ್ಲಾ ಆವರಣವಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು