Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:6 - ಕನ್ನಡ ಸತ್ಯವೇದವು J.V. (BSI)

6 ಆಗ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:6
22 ತಿಳಿವುಗಳ ಹೋಲಿಕೆ  

ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.


ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾದರೂ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.


ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರಕಡೆ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.


ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.


ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಲಿನ ಮೇಲಣ ಪಟ್ಟಿಗೂ ಎರಡು ನಿಲುವುಕಂಬಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದೊಳಗಾಗಿ ಬಾಗಲಿನಿಂದ ಹೊರಗೆ ಹೋಗಕೂಡದು.


ಅವರು ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನವನ್ನು ಮಾಡುವ ಮನೇಬಾಗಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.


ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು -


ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಉಪಕರಣಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು