Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:31 - ಕನ್ನಡ ಸತ್ಯವೇದವು J.V. (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:31
30 ತಿಳಿವುಗಳ ಹೋಲಿಕೆ  

ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ಸೊಲೊಮೋನನು ಪರದೆಯನ್ನು ನೀಲಧೂಮ್ರರಕ್ತವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು.


ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.


ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.


ಆ ಕೆಲಸದವರಲ್ಲಿದ್ದ ಜಾಣರೆಲ್ಲರು ಹೊಸೆದ ನಾರಿನ ಹತ್ತುತಾನು ಬಟ್ಟೆಗಳಿಂದ ಗುಡಾರವನ್ನು ಮಾಡಿ ಆ ಬಟ್ಟೆಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.


[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.


ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.


ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.


ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ.


ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.


ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.


ಅದರ ಮೇಲೆ ಕೃಪಾಸನವನ್ನಿಟ್ಟು ಮಂಜೂಷವನ್ನು ಗುಡಾರದೊಳಕ್ಕೆ ತಂದು ಅದರ ಮುಂದೆ ತೆರೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡಬೇಕು.


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆ ಬಲ್ಲವನೂ ವಿಚಿತ್ರವಾದ ಕೆಲಸವನ್ನು ಕಲ್ಪಿಸುವವನೂ ನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲಿನಿಂದ ಬುಟೇದಾರೀ ಕೆಲಸಮಾಡುವವನೂ ಆಗಿದ್ದನು.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.


ಜಾಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲನ್ನೂ ನಾರಿನ ನೂಲನ್ನೂ ನೂತು ಆ ನೂಲನ್ನು ತಂದುಕೊಟ್ಟರು.


ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ


ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಬೇಕು.


ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ


ಆಗಲಿಂದ ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು; ಇದಲ್ಲದೆ ದೇವಾಲಯದ ತೆರೆಯು ನಡುವೆ ಹರಿದುಹೋಯಿತು.


ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಿ ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.


ಅಂಗಳದ ಬಾಗಲಲ್ಲೇ ಇಪ್ಪತ್ತು ಮೊಳದ ಪರದೆಯು ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಬುಟೇದಾರೀ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೇ ಕಲ್ಲುಗಳೂ ಇರಬೇಕು.


ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕೋಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ,


ದಂಡು ಹೊರಡುವಾಗ ಆರೋನನೂ ಅವನ ಮಕ್ಕಳೂ ಒಳಗೆ ಬಂದು [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಿಬಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು