Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:36 - ಕನ್ನಡ ಸತ್ಯವೇದವು J.V. (BSI)

36 ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:36
22 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಅವನ ತಲೆಗೆ ಮುಂಡಾಸವನ್ನು ಇಟ್ಟು ಅದರ ಮುಂಭಾಗದಲ್ಲಿ ಬಂಗಾರದ ಪಟ್ಟವನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧ ಕಿರೀಟವು.


ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟವಾಗಿರುವ ಪಟ್ಟವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ.


ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಆ ಎರಡು ರತ್ನಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ಮತ್ತು ನೀನು ಎರಡು ಗೋಮೇಧಕರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.


ಆರೋನನು ಸೇವೆಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದ ಹಾಗೆ ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು.


ಅದನ್ನು ಮುಂಡಾಸಕ್ಕೆ ಬಿಗಿಯುವದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು; ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.


ಅವನ ತಲೆಗೆ ಮುಂಡಾಸವನ್ನು ಹಾಕಿಸಿ ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ


ಅದನ್ನು ಮುಂಡಾಸಕ್ಕೆ ಬಿಗಿಸುವದಕ್ಕಾಗಿ ನೀಲಿದಾರವನ್ನು ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೇಕೆಲಸದ ರೀತಿಯಲ್ಲಿ ಅಂಗಿಗಳನ್ನೂ


ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು