Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:43 - ಕನ್ನಡ ಸತ್ಯವೇದವು J.V. (BSI)

43 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಪವಿತ್ರಸ್ಥಾನದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಹಾಕಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:43
18 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಅದಲ್ಲದೆ ನನ್ನ ಯಜ್ಞವೇದಿಯನ್ನು ಮೆಟ್ಲುಗಳಿಂದ ಏರಕೂಡದು; ಹಾಗೆ ಏರಿದರೆ ನಿಮ್ಮ ರಹಸ್ಯಾಂಗವು ಕಾಣಿಸೀತು.


ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಇನ್ನು ಮುಂದೆ ಇಸ್ರಾಯೇಲ್ಯರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು; ಬಂದರೆ ಅವರು ಆ ದೋಷದಿಂದ ಸತ್ತುಹೋದಾರು.


ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ತೊಳಕೊಳ್ಳದೆ ಬಂದರೆ ಸತ್ತಾರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತ ನಿಯಮ.


ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.


ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.


ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು [ಯಾಜಕರು] ಸಾಧಾರಣವೆಂದೆಣಿಸಬಾರದು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ವಿುಕ್ಕದರ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವದಿಲ್ಲ. ಇಸ್ರಾಯೇಲ್ಯರು ಸಮರ್ಪಿಸುವ ದೇವರ ವಸ್ತುಗಳನ್ನು ಸಾಧಾರಣವೆಂದೆಣಿಸಿ ಸಾಯಬೇಡಿರಿ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು