Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:14 - ಕನ್ನಡ ಸತ್ಯವೇದವು J.V. (BSI)

14 ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:14
22 ತಿಳಿವುಗಳ ಹೋಲಿಕೆ  

ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕಯಜ್ಞ.


ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್‍ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.


ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲ್ಯರ ದೋಷಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.


ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.


ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತ;


ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಆರೋನನು ತನಗೋಸ್ಕರವಾದ ದೋಷಪರಿಹಾರಕಯಜ್ಞದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರವನ್ನು ಮಾಡಬೇಕು.


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು.


ನೀನು ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನೂ ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನೂ ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನೂ ಮಾಂಸವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ನೀನು ಆರೋನನಿಗೂ ಅವನ ವಂಶದವರಿಗೂ ಹೀಗೆ ಆಜ್ಞಾಪಿಸು - ದೋಷಪರಿಹಾರಕ ಯಜ್ಞನಿಯಮಗಳು. ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನೂ ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು.


ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರಾ ತೆಗೆದು ಬಿಡಕೂಡದು.


ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.


ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಆಗ ಅವನು ಆ ಆಕಳನ್ನು ಚರ್ಮಮಾಂಸ ರಕ್ತ ಕಲ್ಮಷಗಳು ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.


ಮತ್ತು ದೋಷಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇವಿುಸಲ್ಪಟ್ಟವನು ಪವಿತ್ರಾಲಯದ ಹೊರಗೆ ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.


ಆಹಾ, ನಿಮ್ಮ ಬೀಜವನ್ನು [ಬೆಳೆಯದಂತೆ]ಖಂಡಿಸುವೆನು; ನಿಮ್ಮ ಮುಖದ ಮೇಲೆ ಮಲವನ್ನು, ನಿಮ್ಮ ಹಬ್ಬದ ಪಶುಗಳ ಮಲವನ್ನು ಚೆಲ್ಲಿಬಿಡುವೆನು; ನೀವು ಆ ಮಲದ ತಿಪ್ಪೆಯ ಪಾಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು