Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:27 - ಕನ್ನಡ ಸತ್ಯವೇದವು J.V. (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:27
14 ತಿಳಿವುಗಳ ಹೋಲಿಕೆ  

ಅದಲ್ಲದೆ ಇಸ್ರಾಯೇಲ್ಯರು [ಮಾಡುವ ಸಮಾಧಾನಯಜ್ಞದ್ರವ್ಯಗಳಿಂದ] ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಆಗಬೇಕು; ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ನಿಯಮದಿಂದ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನೂ ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನೂ ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ ಎಂದು ಹೇಳಿದನು.


ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವವಂದರೆ - ದನಗಳಲ್ಲಿಯಾಗಲಿ ಆಡುಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.


ಧರ್ಮಶಾಸ್ತ್ರವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇವಿುಸುತ್ತದೆ; ಆದರೆ ಧರ್ಮಶಾಸ್ತ್ರದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ನೇವಿುಸುತ್ತದೆ.


ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.


ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನೂ ಬಲದೊಡೆಗಳನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ, ಸಮಾಧಾನ ಯಜ್ಞ ಎಂಬಿವುಗಳ ವಿಷಯದಲ್ಲಿ ಮೇಲೆ ಕಂಡದ್ದೆ ವಿಧಿ.


ಮತ್ತು ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲು.


ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು.


ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟು ಅವನಿಗೆ - ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು