Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:40 - ಕನ್ನಡ ಸತ್ಯವೇದವು J.V. (BSI)

40 ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:40
34 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತನಿಯಮ.


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.


[ಪ್ರಭುವು] ಉತ್ಸವಗಳಲ್ಲಿಯೂ ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ಟಗರಿನೊಡನೆ ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಕುರಿಗಳೊಡನೆ ಶಕ್ತಿಯಿದ್ದಷ್ಟು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟಿಗೆ] ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.


ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಒಂದು ಸೇರಿನಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.


ಆ ಏಳು ದಿನಗಳಲ್ಲಿಯೂ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯನೈವೇದ್ಯವನ್ನೂ ಸಮರ್ಪಿಸುವದಲ್ಲದೆ ಮೇಲೆ ಕಂಡ ಕ್ರಮದ ಮೇರೆಗೆ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.


[ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ಪಾನದ್ರವ್ಯವಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.


ಐನೂರು ತೊಲೆ ದಾಲ್ಚಿನ್ನಿ, ಆರುವರೆ ಸೇರು ಒಲೀವ ತೈಲ ಇವುಗಳನ್ನೆಲ್ಲಾ ತೆಗೆದುಕೊಂಡು


ಗೋಮೆರೆಂಬದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವದು.


ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.


ಅವುಗಳಲ್ಲಿ ಒಂದನ್ನು ಪ್ರಾತಃಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.


ಪ್ರಾತಃಕಾಲನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋವಿುನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.


ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.


ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು