Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:16 - ಕನ್ನಡ ಸತ್ಯವೇದವು J.V. (BSI)

16 ನೀನು ಹೋಗಿ ಇಸ್ರಾಯೇಲ್ಯರ ಹಿರಿಯರನ್ನು ಕೂಡಿಸಿ ಅವರಿಗೆ - ನಿಮ್ಮ ಪಿತೃಗಳ ದೇವರು ಅಂದರೆ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ - ನಾನು ನಿಮ್ಮಲ್ಲಿ ಲಕ್ಷ್ಯವಿಟ್ಟು ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ತಿಳುಕೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:16
31 ತಿಳಿವುಗಳ ಹೋಲಿಕೆ  

ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ತರುವಾಯ ಮೋಶೆ ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಕೂಡಿಸಿದರು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.


ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು


ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು.


ಇದಲ್ಲದೆ ಯೋಸೇಫನು ಇಸ್ರಾಯೇಲ್ಯರಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವನಾದದರಿಂದ ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕೆಂದು ಹೇಳಿ ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದದರಿಂದ ಮೋಶೆಯು ಅವನ ಶವವನ್ನು ಸಂಗಡ ತೆಗೆದುಕೊಂಡು ಹೋದನು.


ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.


ಇಸ್ರಾಯೇಲ್ಯರನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.


ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಜನಾಂಗಗಳು ಇದನ್ನು ಕೇಳಿ ನಡುಗುತ್ತಿರುವವು;


ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.


ಯೆಹೋವನು ತಾನು ಹೇಳಿದ್ದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.


ದೇವರು ವಿಸ್ತಾರವಾದ ಗುಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು; ಹಾಗೆಯೇ ಆಯಿತು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು,


ಅದಕ್ಕೆ ಯೆಹೋವನು - ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲ್ಯರ ಹಿರಿಯರಲ್ಲಿ ಕೆಲವರನ್ನು ಕರಕೊಂಡು ಜನರ ಮುಂದೆ ಹೊರಟು [ನಾನು ತೋರಿಸುವ ಸ್ಥಳಕ್ಕೆ] ಹೋಗು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ತರುವಾಯ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಐಗುಪ್ತದೇಶದ ಆಳಿಕೆಗೆ ಬಂದನು.


ಅವರು ಚೀಯೋನಿನಲ್ಲಿ ಯೆಹೋವನಾಮವನ್ನು ವರ್ಣಿಸುವಂತೆಯೂ ಯೆರೂಸಲೇವಿುನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು