Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:18 - ಕನ್ನಡ ಸತ್ಯವೇದವು J.V. (BSI)

18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:18
40 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬದಾಗಿ ಹೇಳಿದ್ದಾನಷ್ಟೆ.


ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಹೀಗನ್ನಬೇಕು - ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ನಾವು ಮೋಶೆಯ ಎಲ್ಲಾ ಮಾತುಗಳನ್ನು ಕೇಳಿದಂತೆ ನಿನ್ನ ಮಾತುಗಳನ್ನೂ ಕೇಳುವೆವು; ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡಲೂ ಇರಲಿ.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.


ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು; ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತಾಡಿ ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ಹೋಗುವ ದಾರಿಯಲ್ಲಿ ಮೋಶೆ ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.


ನೀನು ಹೋಗಿ ಇಸ್ರಾಯೇಲ್ಯರ ಹಿರಿಯರನ್ನು ಕೂಡಿಸಿ ಅವರಿಗೆ - ನಿಮ್ಮ ಪಿತೃಗಳ ದೇವರು ಅಂದರೆ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ - ನಾನು ನಿಮ್ಮಲ್ಲಿ ಲಕ್ಷ್ಯವಿಟ್ಟು ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ತಿಳುಕೊಂಡಿದ್ದೇನೆ;


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ, ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿಪರಿಶುದ್ಧವಾದದ್ದೆಂದು ನೀವು ತಿಳುಕೊಳ್ಳಬೇಕು.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು,


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ನೀನು ಫರೋಹನ ಬಳಿಗೆ ಹೋಗಿ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಅದಕ್ಕೆ ಯೆಹೋವನು - ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲ್ಯರ ಹಿರಿಯರಲ್ಲಿ ಕೆಲವರನ್ನು ಕರಕೊಂಡು ಜನರ ಮುಂದೆ ಹೊರಟು [ನಾನು ತೋರಿಸುವ ಸ್ಥಳಕ್ಕೆ] ಹೋಗು.


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ನಾಳೆಯೇ ಈ ಮಹತ್ಕಾರ್ಯವುಂಟಾಗುವದು ಅನ್ನಬೇಕೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು