Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:19 - ಕನ್ನಡ ಸತ್ಯವೇದವು J.V. (BSI)

19 ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:19
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.


ಅದಕ್ಕೆ ಫರೋಹನು - ಒಳ್ಳೇದು, ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಮಾಡುವಂತೆ ನಿಮಗೆ ಅಪ್ಪಣೆ ಕೊಡುತ್ತೇನೆ; ಆದರೆ ದೂರ ಹೋಗಕೂಡದು; ನನಗೋಸ್ಕರ ಪ್ರಾರ್ಥನೆಮಾಡಿರಿ ಅಂದನು.


ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು.


ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು; ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ.


ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ.


ಯೆಹೋವನು ಮೋಶೆಗೆ - ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲವಾದದರಿಂದ ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನು ಹೆಚ್ಚಾಗಿ ನಡಿಸುವದಕ್ಕೆ ನನಗೆ ಆಸ್ಪದವಾಗುವದೆಂಬದಾಗಿ ಹೇಳಿದ್ದನಷ್ಟೆ.


ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು