Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:16 - ಕನ್ನಡ ಸತ್ಯವೇದವು J.V. (BSI)

16 ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:16
9 ತಿಳಿವುಗಳ ಹೋಲಿಕೆ  

ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು.


ಯೆಹೋವನು ಮೋಶೆಗೆ ಮತ್ತೂ ಹೇಳಿದ್ದೇನಂದರೆ -


ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲ್ಯರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕಕೊಡುವದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.


ಆದರೂ ಲೇವಿಯರು ಅವಸರ ಪಡಲಿಲ್ಲ. ಆದದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರಿಸಿ ಅವನಿಗೆ - ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲಾ ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇವಿುನವರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು