Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:17 - ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ - ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ ಎಂದು ಮೋಶೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:17
20 ತಿಳಿವುಗಳ ಹೋಲಿಕೆ  

ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಮೋಶೆಯು ಯೆಹೋಶುವನಿಗೆ - ನೀನು ಭಟರನ್ನು ಆದುಕೊಂಡು ನಾಳೆ ನಮ್ಮ ಮುಂದೆ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡಬೇಕು; ನಾನು ದೇವದಂಡವನ್ನು ಕೈಯಲ್ಲಿ ಹಿಡುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು ಎಂದು ಹೇಳಿದನು.


ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವದು; ಭಟರು ಘೋಷಿಸಿ ಕೊಂಬೂದುವ ಯುದ್ಧ ಕೋಲಾಹಲದಲ್ಲಿ ಮೋವಾಬು ಸಾಯುವದು.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.


ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ತುತೂರಿಯೂದಿದಾಗೆಲ್ಲಾ ಆಹಾ ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವದು.


ಇಸ್ರಾಯೇಲ್ಯರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿವಿುನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಆರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ - ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಯೆಹೋಶುವನು ಜನರಿಗೆ - ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ; ಆರ್ಭಟಿಸಿರೆಂದು ನಾನು ಹೇಳುವ ದಿವಸದಲ್ಲಿ ಮಾತ್ರ ಆರ್ಭಟಿಸಿರಿ ಎಂದು ಆಜ್ಞಾಪಿಸಿದನು.


ಯಾಜಕರು ಕೊಂಬುಗಳನ್ನು ಊದಬೇಕು. ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಮಹತ್ತರವಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವದು; ಪ್ರತಿಯೊಬ್ಬನೂ ನೆಟ್ಟಗೆ ಒಳನುಗ್ಗಬಹುದು ಎಂದು ಹೇಳಿದನು.


ಅದಕ್ಕವನು - ನನಗೆ ಕೇಳಿಸುವದು ಜಯಧ್ವನಿಯೂ ಅಲ್ಲ, ಅಪಜಯ ಧ್ವನಿಯೂ ಅಲ್ಲ, ಉತ್ಸವಧ್ವನಿಯೇ ಅಂದನು.


ಆದದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಮೇಲೆ ಎದ್ದು ಕುಣಿದಾಡಿದರು.


ಆ ಶಿಲಾಶಾಸನಗಳು ದೇವರ ಕೆಲಸವೇ; ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ ಅಕ್ಷರಗಳೇ.


ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು