Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:19 - ಕನ್ನಡ ಸತ್ಯವೇದವು J.V. (BSI)

19 ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:19
20 ತಿಳಿವುಗಳ ಹೋಲಿಕೆ  

ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಕೂಡಲೆ ಯೆಹೂದಕ್ಕೂ ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು ಒಗ್ಗಟ್ಟೆಂಬ ನನ್ನ ಎರಡನೆಯ ಕೋಲನ್ನು ಕತ್ತರಿಸಿಬಿಟ್ಟೆನು.


ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯವೇ ದುಃಖವಾಯಿತು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಅವರು - ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಆ ಮೋಶೆ ಭೂವಿುಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹುಸಾತ್ವಿಕನು.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.


ಅದಕ್ಕವನು - ನನಗೆ ಕೇಳಿಸುವದು ಜಯಧ್ವನಿಯೂ ಅಲ್ಲ, ಅಪಜಯ ಧ್ವನಿಯೂ ಅಲ್ಲ, ಉತ್ಸವಧ್ವನಿಯೇ ಅಂದನು.


ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು