Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:26 - ಕನ್ನಡ ಸತ್ಯವೇದವು J.V. (BSI)

26 ಅವರು ಕ್ರಮವಿಲ್ಲದೆ ಸ್ವೇಚ್ಫೆಯಾಗಿ ನಡೆದುಕೊಳ್ಳುವದನ್ನು ಮೋಶೆ ನೋಡಿ ಪಾಳೆಯದ ಬಾಗಲಲ್ಲಿ ನಿಂತುಕೊಂಡು - ಯೆಹೋವನ ಪಕ್ಷದವರೆಲ್ಲರು ನನ್ನ ಬಳಿಗೆ ಬರಬೇಕು ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:26
8 ತಿಳಿವುಗಳ ಹೋಲಿಕೆ  

ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು


ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು - ದಾವೀದ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ ಎಂದು ಕೂಗಿದನು.


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.


ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು