Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:27 - ಕನ್ನಡ ಸತ್ಯವೇದವು J.V. (BSI)

27 ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೋಶೆ ಅವರಿಗೆ, “ಇಸ್ರಯೇಲರ ದೇವರಾದ ಸರ್ವೇಶ್ವರನ ಅಪ್ಪಣೆ ಇದು: ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ನಡುವೆ ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿನವರೆಗೆ ಹೋಗುತ್ತಾ ಬರುತ್ತಾ ಅಣ್ಣ-ತಮ್ಮ, ಗೆಳೆಯ-ನೆರೆಯವ ಎಂದು ಲಕ್ಷಿಸದೆ ಈ ಜನರನ್ನು ಸಂಹರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ: ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:27
12 ತಿಳಿವುಗಳ ಹೋಲಿಕೆ  

ಆದಕಾರಣ ಮೋಶೆ ಇಸ್ರಾಯೇಲ್ಯರ ನ್ಯಾಯಾಧಿಪತಿಗಳಿಗೆ - ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳನಿಗೆ ಸೇರಿಕೊಂಡ ತನ್ನ ತನ್ನ ವಶದಲ್ಲಿರುವವರಿಗೆ ಪ್ರಾಣ ಶಿಕ್ಷೆಯನ್ನು ನಡಿಸಬೇಕೆಂದು ಆಜ್ಞಾಪಿಸಿದನು.


ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.


ಅವರು ಕ್ರಮವಿಲ್ಲದೆ ಸ್ವೇಚ್ಫೆಯಾಗಿ ನಡೆದುಕೊಳ್ಳುವದನ್ನು ಮೋಶೆ ನೋಡಿ ಪಾಳೆಯದ ಬಾಗಲಲ್ಲಿ ನಿಂತುಕೊಂಡು - ಯೆಹೋವನ ಪಕ್ಷದವರೆಲ್ಲರು ನನ್ನ ಬಳಿಗೆ ಬರಬೇಕು ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿ ಬಂದರು.


ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಕೊಲ್ಲಲ್ಪಟ್ಟರು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ - ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳನ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ


ವಿುಕ್ಕವರಿಗೆ - ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು