Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:32 - ಕನ್ನಡ ಸತ್ಯವೇದವು J.V. (BSI)

32 ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:32
26 ತಿಳಿವುಗಳ ಹೋಲಿಕೆ  

ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು; ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು