Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:34 - ಕನ್ನಡ ಸತ್ಯವೇದವು J.V. (BSI)

34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:34
21 ತಿಳಿವುಗಳ ಹೋಲಿಕೆ  

ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷವಿುಸುವ ದೇವರಾಗಿದ್ದಿ.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ.


ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.


ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು