Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:8 - ಕನ್ನಡ ಸತ್ಯವೇದವು J.V. (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:8
18 ತಿಳಿವುಗಳ ಹೋಲಿಕೆ  

ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ಆದದರಿಂದ ನೀವು ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಂಡು ನನ್ನ ಜೊತೆಯಲ್ಲಿ ಸೇರಿಸಕೂಡದು.


ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡು ಬಂತು.


ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.


ಯೆಹೋವನೊಬ್ಬನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞಮಾಡುವವನನ್ನು ನಾಶಪಡಿಸಬೇಕು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞ ಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡೀರಿ;


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


ಆದರೆ ಆತನ ಮುಂದೆ ಅವರ ಬಾಯಿ ವಂಚಿಸಿ ನಾಲಿಗೆ ಸುಳ್ಳಾಡಿತು.


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು -


ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು - [ಇಸ್ರಾಯೇಲ್ಯರೇ,] ನಿಮ್ಮನ್ನು ಐಗುಪ್ತದಿಂದ ಕರಕೊಂಡು ಬಂದ ದೇವರು ಇದೇ ಎಂದು ಹೇಳಿ ನಿನ್ನನ್ನು ಅಸಡ್ಡೆ ಮಾಡಿದಾಗಲೂ


ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.


ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು