Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:19 - ಕನ್ನಡ ಸತ್ಯವೇದವು J.V. (BSI)

19 ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:19
16 ತಿಳಿವುಗಳ ಹೋಲಿಕೆ  

ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ಅವನು ಸುಖದಿಂದಲೇ ಇರುವನು; ಅವನ ಸಂತತಿಯವರು ದೇಶವನ್ನು ಅನುಭವಿಸುವರು.


ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು