Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:15 - ಕನ್ನಡ ಸತ್ಯವೇದವು J.V. (BSI)

15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞ ಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನೀನು ಆ ದೇಶದ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಎಚ್ಚರದಿಂದಿರು. ಅವರು ಅನ್ಯದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞ ಅರ್ಪಿಸುವ ಸಮಯದಲ್ಲಿ ಒಬ್ಬನು ನಿನ್ನನ್ನು ಕರೆದಾನು, ನೀನು ಅವನ ಯಜ್ಞಭೋಜನವನ್ನು ಮಾಡಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:15
36 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಅವರು ತಮ್ಮನ್ನು ಬಾಳ್‍ಪೆಗೋರನ ಸೇವೆಗೆ ಒಪ್ಪಿಸಿ ಜಡಮೂರ್ತಿಗಳಿಗೆ ಅರ್ಪಿಸಿದ್ದನ್ನು ಊಟಮಾಡಿದರು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.


ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.


ಪರಲೋಕ ದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ ಟಗರು ಕುರಿಮರಿಗಳನ್ನೂ ಗೋದಿ ಉಪ್ಪೂ ದ್ರಾಕ್ಷಾರಸ ಎಣ್ಣೆ ಇವುಗಳನ್ನೂ ಯೆರೂಸಲೇವಿುನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕೆಂಬದಾಗಿಯೂ ಆಜ್ಞಾಪಿಸುತ್ತೇನೆ.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ


ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.


ನೀವು ಅವರೊಡನೆಯಾಗಲಿ ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ಯೆಹೋವನೊಬ್ಬನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞಮಾಡುವವನನ್ನು ನಾಶಪಡಿಸಬೇಕು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.


ಇಸ್ರಾಯೇಲ್ಯರು ಶಿಟ್ಟೀವಿುನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ಅವರೊಡನೆ ಬೀಗತನಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು. ಅವರಿಂದ ತರಲೂಬಾರದು.


ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ?


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ವಿುಶ್ರವಾದರೆ


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಸೇವಿಸಿದರು.


ಅವರು ತಮ್ಮ ಪಿತೃಗಳ ದೇವರಿಗೆ ದ್ರೋಹಿಗಳಾಗಿ ಆತನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶ ನಿವಾಸಿಗಳ ದೇವರುಗಳನ್ನು ಹಿಂಬಾಲಿಸಿದರು.


ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡಿಸುವದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು