Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:20 - ಕನ್ನಡ ಸತ್ಯವೇದವು J.V. (BSI)

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ ಬದಲು ಕೊಟ್ಟು ಬಿಡಿಸಲೇಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:20
11 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಕತ್ತೆಯ ಚೊಚ್ಚಲುಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲುಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು.


ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲುಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.


ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು


ವರುಷ ವರುಷಕ್ಕೆ ನಿಯವಿುತವಾದ ಕಾಲದಲ್ಲಿ ನೀವು ಈ ಆಚಾರವನ್ನು ನಡಿಸಬೇಕು.


ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.


ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮಗರ್ಭವನ್ನೆಲ್ಲಾ ಗಂಡಾದ ಪಕ್ಷಕ್ಕೆ ಯೆಹೋವನ ಭಾಗವೆಂದು ತಿಳಿದುಕೊಂಡು ಆತನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು