Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:28 - ಕನ್ನಡ ಸತ್ಯವೇದವು J.V. (BSI)

28 ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:28
16 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಆ ಶಿಲಾಶಾಸನಗಳು ದೇವರ ಕೆಲಸವೇ; ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ ಅಕ್ಷರಗಳೇ.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಆ ದಿವಸಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಕಳೆದ ಮೇಲೆ ಆತನಿಗೆ ಹಸಿವಾಯಿತು.


ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.


ನಾನು ಮುಂಚಿನಂತೆ ಹಗಲಿರುಳು ನಾಲ್ವತ್ತು ದಿನವು ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶ ಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.


ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ


ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು