Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:3 - ಕನ್ನಡ ಸತ್ಯವೇದವು J.V. (BSI)

3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಾಯೇಲ್ಯರು ಪ್ರತಿದಿನದ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಹೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:3
11 ತಿಳಿವುಗಳ ಹೋಲಿಕೆ  

ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ ಪ್ರತಿದಿನವೂ ಬೆಳಗಿನಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವದು; ಉದಯಕಾಲದಲ್ಲಿಯೇ [ಪ್ರಾರ್ಥನೆಯನ್ನು] ಸಮರ್ಪಿಸಿ ಸದುತ್ತರವನ್ನು ಎದುರುನೋಡುತ್ತಿರುವೆನು.


ಅಧಿಪತಿಗಳು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನೂ ಚೀಲದ ಪದಕದಲ್ಲಿ ಕೆತ್ತಬೇಕಾದ ರತ್ನಗಳನ್ನೂ


ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯಾರಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಇಟ್ಟಿದ್ದನೋ ಯಾರಾರನ್ನು ಈ ಕೆಲಸಮಾಡುವದಕ್ಕೆ ಹೃದಯ ಪ್ರೇರಿಸಿತೋ ಆ ಜಾಣರೆಲ್ಲರನ್ನೂ ಮೋಶೆ ತನ್ನ ಹತ್ತಿರಕ್ಕೆ ಕರಿಸಿದನು.


ಆಗ ದೇವಮಂದಿರದ ಕೆಲಸವನ್ನು ನಡಿಸುತ್ತಿದ್ದ ಆ ಜಾಣರೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ -


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು