Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:1 - ಕನ್ನಡ ಸತ್ಯವೇದವು J.V. (BSI)

1 ಅವನು ಯಜ್ಞವೇದಿಯನ್ನು ಜಾಲೀಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅವನು ಬಲಿಪೀಠವನ್ನು ಜಾಲಿಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:1
19 ತಿಳಿವುಗಳ ಹೋಲಿಕೆ  

ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.


ನಮಗೊಂದು ಯಜ್ಞವೇದಿ ಉಂಟು, ಈ ವೇದಿಯ ಪದಾರ್ಥಗಳನ್ನು ತಿನ್ನುವದಕ್ಕೆ ಯೆಹೂದ್ಯರ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.


ಇದಲ್ಲದೆ ಅವನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.


ಯೆಹೋವನು ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಲಿನ ಮುಂದೆ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ


ಧೂಪವೇದಿ, ಯಜ್ಞವೇದಿ, ಅದರ ಉಪಕರಣಗಳು,


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಗೆ ಏಕವಾಗಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.


ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.


ಯೆಹೋವನು ಮೋಶೆಗೆ ಮತ್ತೂ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು