Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:1
14 ತಿಳಿವುಗಳ ಹೋಲಿಕೆ  

ಗಂಗಾಳ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು,


ಯಾರಲ್ಲಿ ನೀಲಿಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಯೂ ಆಡುಕೂದಲಿನ ಬಟ್ಟೆಯೂ ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳೂ ಕಡಲುಹಂದಿಯ ತೊಗಲುಗಳೂ ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.


ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು ಇವೇ ಅಂದನು.


ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ; ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯಜನರ ಪ್ರಾಕಾರಕ್ಕೆ ಬರುವರು.


ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.


[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.


ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ


ಯಜ್ಞವೇದಿಯ ಎಲ್ಲಾ ಉಪಕರಣಗಳನ್ನೂ ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನೂ ಅಂಗಳದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನೂ ಮಾಡಿದನು.


ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನೂ ನೀಲಿ ಧೂಮ್ರರಕ್ತವರ್ಣಗಳುಳ್ಳ ದಾರವನ್ನೂ ನಾರಿನ ಬಟ್ಟೆಯನ್ನೂ ಆ ಕೆಲಸಕ್ಕಾಗಿ ಉಪಯೋಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು