Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:27 - ಕನ್ನಡ ಸತ್ಯವೇದವು J.V. (BSI)

27 ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೇಕೆಲಸದ ರೀತಿಯಲ್ಲಿ ಅಂಗಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೆ ಕೆಲಸದ ರೀತಿಯಲ್ಲಿ ಅಂಗಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಈ ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆರೋನನಿಗೆ ಹಾಗೂ ಅವನ ಮಕ್ಕಳಿಗೆ ನಯವಾದ ನಾರಿನಿಂದ ಹೊಸೆದ ಕೆಲಸದಿಂದ ಮಾಡಿದ ಮೇಲಂಗಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:27
14 ತಿಳಿವುಗಳ ಹೋಲಿಕೆ  

ಇವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು.


ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.


ನಾರಿನಿಂದ ಮಹಾಯಾಜಕನ ಮುಂಡಾಸವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಮುಂಡಾಸಗಳನ್ನೂ


ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು ಮಾನರಕ್ಷಕವಾದ ನಾರಿನ ಚಡ್ಡಿಯನ್ನು ಹಾಕಿಕೊಂಡು ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ವೇದಿಯ ಬಳಿಯಲ್ಲಿ ಇಡಬೇಕು.


ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.


ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು