Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:31 - ಕನ್ನಡ ಸತ್ಯವೇದವು J.V. (BSI)

31 ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:31
27 ತಿಳಿವುಗಳ ಹೋಲಿಕೆ  

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.


ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತದೇಶದಲ್ಲಿದ್ದ ಇಸ್ರಾಯೇಲ್ಯರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದದರಿಂದ ನಾವು ಯೆಹೋವನ ಪಸ್ಕವೆಂಬ ಈ ಯಜ್ಞಾಚಾರವನ್ನು ನಡಿಸುವದುಂಟು ಎಂದು ಹೇಳಬೇಕು ಅಂದನು.


ನೀನು ಹೋಗಿ ಇಸ್ರಾಯೇಲ್ಯರ ಹಿರಿಯರನ್ನು ಕೂಡಿಸಿ ಅವರಿಗೆ - ನಿಮ್ಮ ಪಿತೃಗಳ ದೇವರು ಅಂದರೆ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ - ನಾನು ನಿಮ್ಮಲ್ಲಿ ಲಕ್ಷ್ಯವಿಟ್ಟು ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ತಿಳುಕೊಂಡಿದ್ದೇನೆ;


ಇಸ್ರಾಯೇಲ್ಯರನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.


ಆ ಮನುಷ್ಯನು ಇದನ್ನು ಕೇಳಿ ಬೊಗ್ಗಿಕೊಂಡು ಯೆಹೋವನಿಗೆ ನಮಸ್ಕರಿಸಿ -


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.


ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೆಹೋವನ ಮುಂದೆ ಅಡ್ಡ ಬಿದ್ದು ನಮಸ್ಕರಿಸಿದರು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತಾಡಿ -


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ಮೋಶೆ ತ್ವರೆಪಟ್ಟು ನೆಲದಲ್ಲಿ ಅಡ್ದಬಿದ್ದು ನಮಸ್ಕರಿಸಿ -


ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು.


ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಆ ಮೇಘಸ್ತಂಭವು ಡೇರೆಯ ಬಾಗಲಲ್ಲಿ ನಿಂತದ್ದನ್ನು ಜನರೆಲ್ಲರು ನೋಡಿ ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲೇ ಅಡ್ಡ ಬೀಳುವರು.


ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು