Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:8 - ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೋವನು ಅವನಿಗೆ - ಅವರು ನಿನ್ನನ್ನು ನಂಬದೆ ಮೊದಲನೆಯ ಮಹತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:8
10 ತಿಳಿವುಗಳ ಹೋಲಿಕೆ  

ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ [ಪ್ರಕಟಿಸುತ್ತಾನಲ್ಲಾ ಇತ್ಯಾದಿ].


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.


ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು.


ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು.


ಆಗ ಮೋಶೆ, ತನ್ನನ್ನು ಯೆಹೋವನು ಯಾವ ಮಾತುಗಳನ್ನು ಹೇಳುವದಕ್ಕೆ ಕಳುಹಿಸಿದನೋ ಯಾವ ಮಹತ್ಕಾರ್ಯಗಳನ್ನು ಮಾಡುವದಕ್ಕೆ ಆಜ್ಞಾಪಿಸಿದನೋ ಅವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.


ಅವನು ಆತನಿಗೆ - ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾವಿುಯವರೇ ಆಗಿದ್ದೀರೆಂಬದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು