Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:33 - ಕನ್ನಡ ಸತ್ಯವೇದವು J.V. (BSI)

33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:33
21 ತಿಳಿವುಗಳ ಹೋಲಿಕೆ  

ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ತೂಗಬಿಡಬೇಕು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಕಡೆಗಾಣಿಸಿದ್ದೇನೆ, ಕ್ರಿಸ್ತನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ;


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ?


ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.


ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಯಜ್ಞವೇದಿಯ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳಕೊಳ್ಳುವರು.


ಸೊಲೊಮೋನನು ದೇವಾಲಯವನ್ನು ಕಟ್ಟಿಸಿದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು