Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:9 - ಕನ್ನಡ ಸತ್ಯವೇದವು J.V. (BSI)

9 ಆಗ ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:9
16 ತಿಳಿವುಗಳ ಹೋಲಿಕೆ  

ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಡೇರೆಯ ಬಾಗಲಿನ ಪರದೆಯನ್ನೂ; ತಾಮ್ರದ ಯಜ್ಞವೇದಿಯು, ಅದರ ತಾಮ್ರದ ಜಾಳಿಗೆಯು, ಅದರ ಕೋಲುಗಳು, ಉಪಕರಣಗಳು ಇವುಗಳನ್ನೂ; ಗಂಗಾಳವು, ಅದರ ಪೀಠವು ಇವುಗಳನ್ನೂ;


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.


ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಉಪಕರಣಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.


ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ತೂಗಬಿಡಬೇಕು.


ನೀನು ರೆಕ್ಕೆತೆರೆದು ನೆರಳುಕೊಡುವ ಕೆರೂಬಿಯಾಗಿದ್ದಿ; ನಾನು ನಿನ್ನನ್ನು ದೇವರ ಪರಿಶುದ್ಧಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಕೆಂಡದ ಮಳೆಯಲ್ಲಿ ವಿಹಾರಮಾಡುತ್ತಾ ಇದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು