ವಿಮೋಚನಕಾಂಡ 5:16 - ಕನ್ನಡ ಸತ್ಯವೇದವು J.V. (BSI)16 ದಾಸರಿಗೆ ಅಧಿಕಾರಿಗಳು ಹುಲ್ಲು ಕೊಡದೆ ಇಟ್ಟಿಗೆಗಳನ್ನು ಮಾಡಬೇಕು ಅನ್ನುತ್ತಾರೆ; ಆದದರಿಂದ ದಾಸರು ಏಟುಗಳನ್ನು ತಿನ್ನಬೇಕಾಯಿತು; ತಪ್ಪು ಖಾವಂದರ ಜನರದೇ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಧಿಕಾರಿಗಳು ಹುಲ್ಲು ಒದಗಿಸದೆ ಇಟ್ಟಿಗೆಗಳನ್ನು ಮಾಡಬೇಕೆನ್ನುತ್ತಾರೆ. ಇದರಿಂದ ದಾಸರಾದ ನಾವು ಏಟು ತಿನ್ನಬೇಕಾಯಿತು. ತಪ್ಪು ತಮ್ಮ ಜನರದೇ,” ಎಂದು ದೂರಿತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು. ಅಧ್ಯಾಯವನ್ನು ನೋಡಿ |