Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:22 - ಕನ್ನಡ ಸತ್ಯವೇದವು J.V. (BSI)

22 ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಬಂದು - ಸ್ವಾಮೀ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ನನ್ನನ್ನು ಕಳುಹಿಸಿದ್ದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಮೋಶೆ ಸರ್ವೇಶ್ವರನ ಸನ್ನಿಧಿಗೆ ಮತ್ತೆ ಬಂದು, “ಸ್ವಾಮೀ, ಈ ಜನರಿಗೆ ಹೀಗೇಕೆ ಮಾಡಿದಿರಿ? ನನ್ನನ್ನೇಕೆ ಇಲ್ಲಿಗೆ ಕಳಿಸಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಮೋಶೆಯು ಯೆಹೋವನಿಗೆ ಪ್ರಾರ್ಥಿಸಿ, “ಯೆಹೋವನೇ, ನಿನ್ನ ಜನರಿಗೆ ಈ ಕೇಡನ್ನು ಏಕೆ ಮಾಡಿದೆ? ನನ್ನನ್ನು ಯಾಕೆ ಇಲ್ಲಿಗೆ ಕಳುಹಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:22
12 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವದಿಲ್ಲ.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಆಗ ಮೋಶೆ ಯೆಹೋವನಿಗೆ - ಈ ಜನರನ್ನು ನಡಿಸಿಕೊಂಡು ಹೋಗುವ ಭಾರವನ್ನು ನನ್ನ ಮೇಲೆ ಹೊರಿಸಿ ನೀನು ಯಾಕೆ ನಿನ್ನ ದಾಸನಿಗೆ ಅಪಕಾರ ಮಾಡುತ್ತೀಯೇ?


ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.


ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು