Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:5 - ಕನ್ನಡ ಸತ್ಯವೇದವು J.V. (BSI)

5 ಐಗುಪ್ತ್ಯರು ದಾಸರನ್ನಾಗಿ ಮಾಡಿಕೊಂಡಿರುವ ಇಸ್ರಾಯೇಲ್ಯರ ಗೋಳು ಈಗ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಜಿಪ್ಟಿನವರು ಗುಲಾಮರನ್ನಾಗಿಸಿಕೊಂಡಿರುವ ಇಸ್ರಯೇಲರ ಗೋಳು ನನಗೆ ಕೇಳಿಸಿದೆ. ನಾನು ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:5
11 ತಿಳಿವುಗಳ ಹೋಲಿಕೆ  

ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಆತನು ನಮ್ಮ ಪೂರ್ವಿಕರಿಗೆ ಹೇಳಿದ್ದಕ್ಕೆ ಸರಿಯಾಗಿ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬದನ್ನು ನೆನಸಿಕೊಂಡು ತನ್ನ ಸೇವಕನಾದ ಇಸ್ರಾಯೇಲನನ್ನು ಕೈಹಿಡಿದಿದ್ದಾನೆ ಅಂದಳು.


ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆಗ ನಾನು ನಿಮ್ಮನ್ನೂ ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಪ್ರತಿಜ್ಞೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಪ್ರಾಣಿಗಳನ್ನು ಹಾಳುಮಾಡುವ ಪ್ರಳಯವಾಗುವದಿಲ್ಲ.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಐಗುಪ್ತ್ಯರ ಅರಸನು ಅವರಿಗೆ - ಮೋಶೆಯೇ, ಆರೋನನೇ, ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ನೀವು ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಕ್ಕೆ ನಡೆಯಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು