Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:14 - ಕನ್ನಡ ಸತ್ಯವೇದವು J.V. (BSI)

14 ತರುವಾಯ ಯೆಹೋವನು ಮೋಶೆಗೆ - ಫರೋಹನ ಹೃದಯವು ಮೊಂಡಾಗಿದೆ; ತಾನು ಜನರಿಗೆ ಅಪ್ಪಣೆ ಕೊಡುವದಿಲ್ಲವೆನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು: “ಫರೋಹನ ಹೃದಯ ಮೊಂಡಾಗಿದೆ. ಜನರು ಹೋಗಲು ಅಪ್ಪಣೆ ಕೊಡುವುದಿಲ್ಲವೆನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ಮೋಶೆಗೆ, “ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವುದಕ್ಕೆ ನಿರಾಕರಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:14
21 ತಿಳಿವುಗಳ ಹೋಲಿಕೆ  

ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಪಡಿಸಿದದರಿಂದ ಅವರಿಗೆ ಅಪ್ಪಣೆ ಕೊಡುವದಕ್ಕೆ ಫರೋಹನು ಒಪ್ಪಲಿಲ್ಲ.


ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ


ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.


ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ


ಅಪ್ಪಣೆಕೊಡದೆ ಹೋದರೆ ನಾನು ನಿನ್ನ ದೇಶಕ್ಕೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಅವನು ನದಿಗೆ ಹೋಗುತ್ತಾನಲ್ಲಾ. ಸರ್ಪವಾಗಿ ಮಾಡಲ್ಪಟ್ಟ ಆ ಕೋಲನ್ನು ನೀನು ಕೈಯಲ್ಲಿ ಹಿಡಿದುಕೊಂಡು ಅವನನ್ನು ಎದುರುಗೊಳ್ಳುವದಕ್ಕೆ ನೈಲ್ ನದೀತೀರದಲ್ಲಿ ನಿಂತುಕೊಂಡು ಹೀಗನ್ನಬೇಕು -


ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು.


ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ.


ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವವು; ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ತಿಳಿದುಕೊಳ್ಳುವಿ ಅಂದನು.


ಆದರೆ ಆ ಬಿರುಮಳೆಯೂ ಕಲ್ಲಿನ ಮಳೆಯೂ ಗುಡುಗೂ ನಿಂತು ಹೋದದ್ದನ್ನು ಫರೋಹನು ಕಂಡಾಗ ಅವನೂ ಅವನ ಪರಿವಾರದವರೂ ಇನ್ನೂ ಪಾಪಿಷ್ಠರಾಗಿ ತಮ್ಮ ಹೃದಯಗಳನ್ನು ಮೊಂಡುಮಾಡಿಕೊಂಡರು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಐಗುಪ್ತ್ಯರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು