Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:27 - ಕನ್ನಡ ಸತ್ಯವೇದವು J.V. (BSI)

27 ನಾವು ಅರಣ್ಯದಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’." ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:27
8 ತಿಳಿವುಗಳ ಹೋಲಿಕೆ  

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು.


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು