Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:4 - ಕನ್ನಡ ಸತ್ಯವೇದವು J.V. (BSI)

4 ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:4
13 ತಿಳಿವುಗಳ ಹೋಲಿಕೆ  

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?


ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು


ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯವಾಗಿ ಹುಟ್ಟುವವು; ಅವು ಹೊರಟುಬಂದು ನಿನ್ನ ಅರಮನೆಯಲ್ಲಿಯೂ ಮಲಗುವ ಕೋಣೆಯಲ್ಲಿಯೂ ಮಂಚದ ಮೇಲೆಯೂ ಬರುವದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ ನಿನ್ನ ಪ್ರಜೆಗಳ ಮೇಲೆಯೂ ಒಲೆಗಳಲ್ಲಿಯೂ ಹಿಟ್ಟುನಾದುವ ಕೊಣವಿಗೆಗಳಲ್ಲಿಯೂ ಬರುವವು;


ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನೀನು ಕೋಲನ್ನು ಹಿಡಿದುಕೊಂಡು ಹೊಳೆ ಕಾಲುವೆ ಕೆರೆ ಇವುಗಳ ಮೇಲೆ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.


ಯೆಹೋವನು ಹಾಗೆಯೇ ಮಾಡಿದನು; ವಿಷದ ಹುಳಗಳು ಫರೋಹನ ಅರಮನೆಯಲ್ಲಿಯೂ ಅವನ ಪರಿವಾರದವರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು; ಅವುಗಳಿಂದ ದೇಶವು ಹಾಳಾಯಿತು.


ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.


ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು